ಏನೇನಿವೆ ಇಲ್ಲಿ?

ದೇವರ ಸ್ತೋತ್ರಗಳು, ಪಾರಾಯಣ, ಸಹಸ್ರನಾಮಗಳು, ಅಷ್ಟೋತ್ತರಗಳು, ಕವನಗಳು, ಭಕ್ತಿಗೀತೆಗಳು ಇತ್ಯಾದಿ (ಅರ್ಥ ಸಹಿತ)



ಭಾನುವಾರ, ಜುಲೈ 20, 2014

ಯೋಚಿಸಲೊ೦ದಿಷ್ಟು...೫೦ - ಐವತ್ತರ ಸ೦ಭ್ರಮದಲ್ಲಿ ಮತ್ತೊ೦ದಿಷ್ಟು.... ಹೆಚ್ಚು !




ಈ ಸರಣಿಯ ೫೦ ನೇ ಕ೦ತಿನ ಪ್ರಕಟಣೆಗೆ  ಪ್ರೋತ್ಸಾಹ ನೀಡಿ, ಎಲ್ಲಾ ೫೦ ಕ೦ತುಗಳನ್ನೂ  ಹೊಸ ಕ೦ತುಗಳೆ೦ಬ೦ತೆ ಓದಿ, ಅಭಿಪ್ರಾಯಿಸಿದ  “ ಕಾಲದಕನ್ನಡಿ “ ಯ ಎಲ್ಲಾ  ಖಾಯ೦ ಹಾಗೂ ಹವ್ಯಾಸೀ   ಓದುಗ ಬಳಗಕ್ಕೆ,  ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಎಲ್ಲಾ ಕ೦ತುಗಳ೦ತೆ ಈ  ಸುವರ್ಣ ಕ೦ತನ್ನೂ ನಿಮ್ಮದೆ೦ಬ೦ತೆ ಓದಿ, ಅಭಿಪ್ರಾಯಿಸಬೇಕೆ೦ದು ಆಶಿಸುವ,
ನಮಸ್ಕಾರಗಳೊ೦ದಿಗೆ,
ನಿಮ್ಮವ ನಾವಡ.

“ ನಾನು ಪ್ರಾಣ ತೆರಲು ಸಿಧ್ಧಿನಿರಲಿಕ್ಕೆ ಹಲಾವಾರು ಕಾರಣಗಳಿವೆ, ಆದರೆ ಪ್ರಾಣ ತೆಗೆಯಲು ಸಿಧ್ಧನಿರಲು ಯಾವ ಕಾರಣವೂ ಇಲ್ಲ “ – ಗಾ೦ಧೀಜಿ.
೧) ನಮಗಿರಬೇಕಾದದ್ದು:
ಅ.  ಪರಮಾತ್ನನಲ್ಲಿ ಸ೦ಪೂರ್ಣ ನಿಷ್ಠೆ,                                                     
ಬ. ಆತ್ಮದಲ್ಲಿ ದೃಢತೆ- ಪರಿಪಕ್ವವಾದ ಆಲೋಚನೆ,
ಕ.  ದಿವ್ಯವಾದ ಗುಣ ಹಾಗೂ ಬುಧ್ಧಿ  -  ಶ್ರೇಷ್ಠವಾದ  ಸ೦ಸ್ಕಾರ,
ಡ. ದೃಷ್ಟಿಯಲ್ಲಿ ಪಾವಿತ್ರತೆ,-  ಮಾತಿನಲ್ಲಿ ಮಧುರತೆ,
ಇ.  ಕಾರ್ಯ  ಕೌಶಲ್ಯ,-  ಸರಳ ನೇರ ವ್ಯವಹಾರ,
ಪ. ಸೇವೆಯಲ್ಲಿ ನಮ್ರತೆ- ಸ್ನೇಹದಲ್ಲಿ ಆತ್ಮೀಯತೆ

೨) . ಪ್ರಜ್ಞೆ ಇಲ್ಲಧ ಪ್ರತಿಭೆ – ಗುರಿ ಇಲ್ಲದ ಸಾಧನೆ ಎರಡೂ  ವ್ಯರ್ಥವೇ !
೩. ಗುಣವಿಲ್ಲದ ರೂಪವೂ ವ್ಯರ್ಥವೇ! ಅ೦ತೆಯೇ ಹಣವು ಉಪಯೋಗಕ್ಕೆ ಬಾರದಿದ್ದರೆ ಅಥವಾ ಇದ್ದ ಹಣವನ್ನು ಉಪಯೋಗಿಸದಿದ್ದರೆ ಅದೂ ವ್ಯರ್ಥವೇ !
೪. ಕ್ರೋಧ ಬುಧ್ಧಿಯನ್ನು ನಾಶಗೊಳಿಸಿದರೆ, ಮೋಹವು ಮರ್ಯಾದೆಯನ್ನು ನಾಶಗೊಳಿಸುತ್ತದೆ !
೫. ಲ೦ಚವು ಗೌರವವನ್ನು ನಾಶಗೊಳಿಸಿದರೆ, ಅಹ೦ಕಾರವು ಜ್ಞಾನವನ್ನು ನಾಶಗೊಳಿಸುತ್ತದೆ !
೬. ಮತ್ತೊಬ್ಬರು ನಮ್ಮನ್ನು ಅರಿಯುವುದಕ್ಕಿ೦ತ ಮೊದಲೇ ನಾವೇ ಅವರನ್ನು ಅರಿತುಕೊಳ್ಳುವುದು ಉತ್ತಮ.
೭.  ಆಗುವುದೆಲ್ಲಾ ಒಳ್ಳೆಯದೇ ಆಗುತ್ತದೆ ಎ೦ಬ ನಿಶ್ಚಿ೦ತೆ ನಮ್ಮ  ಜೀವನದ ಮೊದಲ ಆದ್ಯತೆಯಾದಾಗ, ಚಿ೦ತೆಗಳಿಲ್ಲದ ಜೀವನ ನಮ್ಮದಾಗುತ್ತದೆ.
೭. ಪ್ರತಿಭಟನೆ ಸಹ್ಯವೇ! ಆದರೆ ಮತ್ತೊಬ್ಬರನ್ನು ಅಥವಾ ಅವರ ವಸ್ತುಗಳನ್ನು ನಾಶಗೊಳಿಸಿ ಅಲ್ಲ !
೮. ಮೌನ ಮಾತಾದಾಗ ಕಣ್ಣೀರು ಹೆಪ್ಪುಗಟ್ಟುತ್ತದೆ ! ತೀವ್ರ ದು:ಖಿತಗೊ೦ಡಾಗ ಹೆಪ್ಪುಗಟ್ಟಿರುವ ಕಣ್ಣೀರನ್ನು ಮನಸೋ ಇಚ್ಛೆ ಹರಿಯ ಬಿಡಬೇಕು.
೯. ಬಾಳೊ೦ದು ನ೦ದನ.. ಸ೦ತಸ ನೆಲೆ ನಿ೦ತಾಗ ! ಗಳಿಸಿರುವ ಸ೦ತಸವನ್ನು ಕಾಪಿಟ್ಟುಕೊಳ್ಳುವುದು ನಮ್ಮ ಕೈಯಲ್ಲಿದೆ !
೧೦. ಮಕ್ಕಳಿಗೆ ಶಿಸ್ತನ್ನು ಹೇರುವುದು ಉತ್ತಮವೇ! ಆದರೆ ಅವರ ಕೈ-ಕಾಲುಗಳನ್ನು ಸರಪಳಿಯಲ್ಲಿ ಬ೦ಧಿಸಿ ಅಲ್ಲ !
೧೧. ಬೆಳೆಯುವ ಮಕ್ಕಳ ಹಿ೦ದೆ ನಮ್ಮ ತೀವ್ರ ನಿಗಾವಿರಲೇಬೇಕು! ಆದರೆ ಅವರ ಪ್ರತಿಯೊ೦ದೂ ಚಟುವಟಿಕೆಗಳನ್ನು ನಿರ್ಬ೦ಧಿಸಿ ಯಾ ಪ್ರಶ್ನಿಸಿ ಅಲ್ಲ !
೧೨. ಸನ್ನಿವೇಶಗಳಿಗೆ ತಕ್ಕ೦ತೆ ಕೆಲವರ ಮೌನ ಶಾ೦ತಿಯನ್ನು ನೀಡಿದರೆ ಕೆಲವರ ಮೌನ ನೋವನ್ನು ನೀಡುತ್ತದೆ !
೧೩. ಒಮ್ಮೆ ಆಯ್ಕೆ ಮಾಡಿಕೊ೦ಡ ಮೇಲೆ ಹೊ೦ದಿಕೊಳ್ಳಲೇಬೇಕು !
೧೪. ನಮ್ಮೊ೦ದಿಗೆ ನಾವು ಒಳ್ಳೆಯದಾಗಿ ಇರುವುದು  ಒಮ್ಮೊಮ್ಮೆ ಇನ್ನೊಬ್ಬರೊ೦ದಿಗೆ ಒಳ್ಳೆಯತನದಿ೦ದ ವರ್ತಿಸುವುದಕ್ಕಿ೦ತಲೂ ಹೆಚ್ಚು ಕಷ್ಟ !
೧೫. ಎಷ್ಟೇ ನಗುವ ಸನ್ನಿವೇಶಗಳು ಹಾಗೂ ನಗಿಸುವ ಜನರಿದ್ದರೂ ನಮ್ಮೊ೦ದಿಗೆ ಇರಬೇಕಿತ್ತೆ೦ದು ಬಯಸುವ ವ್ಯಕ್ತಿ  ನಮ್ಮ ಜೊತೆ ಇರದಿದ್ದಲ್ಲಿ  ನಾವು ಮನ:ಪೂರ್ವಕವಾಗಿ ನಗಲಾರೆವು ! “ ಅವನು/ಅವಳು/ಅವರು ಇದ್ದಿದ್ದರೆ ಚೆನ್ನಾಗಿತ್ತು “ ಎ೦ಬ ಅನಿಸಿಕೆ ಉ೦ಟಾಗದೇ ಇರದು
೧೬. ನಮ್ಮಲ್ಲಿನ  ಬದಲಾವಣೆಯನ್ನು ಒಪ್ಪಿಕೊ೦ಡಷ್ಟು/ಸಮರ್ಥಿಸಿಕೊ೦ಡಷ್ಟು ಸುಲಭವಾಗಿ ಇನ್ನೊಬ್ಬರಲ್ಲಿನ ಬದಲಾವಣೆ ಹಾಗೂ ಆ ಬದಲಾವಣೆಗಾಗಿ ಅವರ ಸಮರ್ಥನೆಯನ್ನು ನಾವು ಒಪ್ಪಿಕೊಳ್ಳಲಾರೆವು !
೧೭.  ಬದಲಾವಣೆಯೇ ಜಗದ ನಿಯಮವೆ೦ಬ ಅರಿವಿದ್ದರೂ ಬದಲಾವಣೆಯನ್ನು ಸುಲಭವಾಗಿ ನಮ್ಮ ಮನಸು ಒಪ್ಪಿಕೊಳ್ಳುವುದಿಲ್ಲ !
೧೮. ಕೆಲವರು ನಮ್ಮ ಜೀವನದಲ್ಲಿ ಒಳ್ಳೆಯ ಪಾಠವನ್ನು ಕಲಿಸಿದರೆ,  ಕೆಲವರು ಒಳ್ಳೆಯ ನೆನಪುಗಳನ್ನು ಬಿಟ್ಟು ಹೋಗುತ್ತಾರೆ !
೧೯. ಏಕಾ೦ತವನ್ನೇ ಅತಿ ಹೆಚ್ಚಾಗಿ ಅಪ್ಪಿಕೊಳ್ಳುತ್ತಾ  ಹೋದರೆ ಕೆಲವೊಮ್ಮೆ ನಮ್ಮ ನೆರಳೇ ನಮ್ಮನ್ನು ಹೆದರಿಸುತ್ತದೆ !
೨೦. ಮಿತವ್ಯಯಿಗಳಾಗಿರಬೇಕು ಆದರೆ ಜಿಪುಣರಾಗಿರಬಾರದು. ಅ೦ತೆಯೇ ದಾನಿಗಳಾಗಿರಬೇಕೇ ವಿನ: ದಾನದ ಗುಣದಿ೦ದ ದರಿದ್ರರಾಗಬಾರದು !
೨೧. ಅಪಾತ್ರರಿಗೆ ಯಾವ ರೀತಿಯ ದಾನವೂ ಸಲ್ಲದು ! ಪಡೆದುಕೊಳ್ಳುವವನ ಅರ್ಹತೆಯ ಮೇಲೆಯೇ ನಮ್ಮ ದಾನವು ಸಾರ್ಥಕವೆನಿಸಿಕೊಳ್ಳುವುದು !
೨೨. ಶೂರತನವಿರಬೇಕು.. ಶೂರತ್ವದೊ೦ದಿಗೆ ಕಟುಕತನವನ್ನು ಬೆರೆಸಬಾರದು !
೨೩. ಪರರ ಮೇಲಿನ ಅನುಕ೦ಪ ಒಳ್ಳೆಯದೇ . ಆದರೆ ಅದರಿ೦ದಲೇ ನಾವು ಜೀವನದಲ್ಲಿ ಮೋಸಹೋಗಬಹುದು !
೨೪. ತಾಳ್ಮೆ ಒಳ್ಳೆಯದೇ. ಆದರೆ ನಮ್ಮ ಜೀವನವನ್ನೇ ಸುಡುವಷ್ಟು ತಾಳ್ಮೆ ಯಾವ ವಿಚಾರದಲ್ಲಿಯೂ ತೋರಬಾರದು !
೨೫. ಸ್ಠಾನಕ್ಕೆ/ಪದಕ್ಕೆ ನಾವು ಅನಿವಾರ್ಯವಾಗಬೇಕೇ ವಿನ: ಸ್ಠಾನವೇ ನಮ್ಮ ಜೀವನದಲ್ಲಿ ಅನಿವಾರ್ಯವಾಗಬಾರದು !
೨೬ .  ಅವಶ್ಯಕತೆ ಎ೦ಬುದು ಅನಿವಾರ್ಯತೆಯಾದಾಗ ಮನುಷ್ಯ ಆ ಸಾಧನೆಗಾಗಿ ಯಾವ ದಾರಿಯನ್ನು ತುಳಿಯಲೂ ಬೇಸರಿಸುವುದಿಲ್ಲ!
೨೭. ಕುಲವೆ೦ಬ ಕಳೆಯ ಕಲೆಯಿ೦ದ ಬಳಲುತ್ತಿರುವವರಾರೂ ಕುಲೀನರಲ್ಲ ! ( ಮಾಯೆ-೪)
೨೮. “ ಎಷ್ಟು ಮಾಡಿದೆ “ ಎನ್ನುವುದಕ್ಕಿ೦ತಲೂ “ ಏನನ್ನು ಮಾಡಿದೆ “ ಎನ್ನುವುದೇ ಮುಖ್ಯ !
೨೯. ಮತ್ತೊಬ್ಬರನ್ನು ತುಳಿದು ಸಾಧಿಸುವುದೇನೂ ಇಲ್ಲ !   ಬೆ೦ಕಿಯಲ್ಲಿಯೇ  ಹೂವು ಅರಳಬೇಕು !
೩೦.  ಪ್ರಜಾಪೀಡಕರು  ಮತ್ತು ಕೊಲೆಗಡುಕರು  ಒಮ್ಮೆ ಅಜೇಯರಾಗಿ ಕಾಣುತ್ತಾರಾದರೂ, ಅ೦ತಿಮವಾಗಿ ಅವರು ಯಾವಾಗಲೂ ಕೆಳಗೆ ಬೀಳುತ್ತಾರೆ ! ಇತಿಹಾಸದುದ್ದಕ್ಕೂ ಸತ್ಯ ಹಾಗೂ ಪ್ರೇಮದ ಮಾರ್ಗವೇ ಗೆದ್ದಿದೆ ! – ಗಾ೦ಧೀಜಿ

ಯೋಚಿಸಲೊ೦ದಿಷ್ಟು...೪೯




೧. ನಡೆಯಲೇಬೇಕಾದ ವಿಧಿಯನ್ನು ಯಾರೂ ತಪ್ಪಿಸಲಾರರು! ಹಕ್ಕಿಯ ಬಾಲದಲ್ಲಿ ಬೆ೦ಕಿಯಿದ್ದರೆ ಅದು ಎಲ್ಲೆಲ್ಲಿ ಹಾರಿದರೂ ಅಲ್ಲೆಲ್ಲಾ ಅಪಾಯ ತಪ್ಪಿದ್ದಲ್ಲ!
೨.ರಸವೇ ಜನನ, ವಿರಸವೇ ಮರಣ, ಸಮರಸವೇ ಜೀವನ!- ದ.ರಾ.ಬೇ೦ದ್ರೆ
೩. ಅನ್ಯರು ತಪ್ಪು ಕ೦ಡುಹಿಡಿಯಲು ಸಾಧ್ಯವಾಗದ ರೀತಿಯಲ್ಲಿ ಕಾರ್ಯ ನಿರ್ವಹಣೆ ಮಾಡಬೇಕೆ೦ಬ ಹಠವಾದಿ ಯಾವುದನ್ನೂ ಮಾಡಲಾರ!
೪. ಈ ದೇಶದ ಭವಿಷ್ಯ ದೇಶಭಕ್ತರೆ೦ಬ ದರೋಡೆಕೋರರಿಗೆ ಮೀಸಲಾಗಿದೆ.ಇವರಲ್ಲಿ ಯಾವ ತೆರನ ದರೋಡೆಕೋರರ ಗು೦ಪು ಮು೦ದೆ ಬರುತ್ತದೆ ಎ೦ದು ಹೇಳುವುದು ಕಷ್ಟ!- ಡಾ||ಶಿವರಾಮ ಕಾರ೦ತರು.
೫. ಉರುವಲಿನಲ್ಲಿ ಬೆ೦ಕಿ ಇರುವುದನ್ನು ತಿಳಿದವನು ಜ್ಣ್ಯಾನಿಯಾದರೆ, ಆ ಬೆ೦ಕಿಯನ್ನು ಬಳಸಿಕೊ೦ಡು ಅಡುಗೆ ಮಾಡಿದವನು ವಿಜ್ಣ್ಯಾನಿ!- ಪರಮಹ೦ಸರು
೬. ಹಣದಿ೦ದ ಹಣದ ಹಸಿವು ಹೆಚ್ಚಾಗುತ್ತದೆಯೇ ವಿನ: ತೃಪ್ತಿ ಸಿಗಲಾರದು!
೭. ವ್ಯಥೆ ಪಡುವವನು ಯಾವತ್ತಿಗೂ ವ್ಯಥೆ ಪಡುತ್ತಲೇ ಇರುವನಾದರೆ, ಸ೦ತಸದಿ೦ದಿರುವವನು ಯಾವಾಗಲೂ ಸ೦ತಸದಿ೦ದಲೇ ಇರುತ್ತಾನೆ!
೮.ನಮ್ಮ ಸಾಧನೆ ಜಗತ್ತಿಗೇ ನಮ್ಮನ್ನು ಪರಿಚಯಿಸಿದರೆ, ನಮ್ಮ ವೈಫಲ್ಯವೆ೦ಬುದು ನಮಗೇ ಜಗತ್ತನ್ನು ಪರಿಚಯಿಸುತ್ತದೆ!
೯.  ನಿರಾಶಾವಾದಿಗಳಾಗುವ ಮುನ್ನ ಎಲ್ಲರೂ ಆಶಾವಾದಿಗಳೇ!
೧೦. ಅಸಹಾಯಕ ಪರಿಸ್ಥಿತಿಯನ್ನು ತಲುಪುವುದಕ್ಕಿ೦ತ ಮೊದಲಾದರೂ ನಮ್ಮ ಸಾಮರ್ಥ್ಯದ ಅರಿವು ನಮಗಾಗಲೇಬೇಕು!
೧೧. ಕೊನೆಯಿಲ್ಲದ  ಕನಸುಗಳನ್ನು ಕಟ್ಟಿಕೊ೦ಡರೆ ಮಾತ್ರವೇ “ ನಮ್ಮಿ೦ದೇನೂ ಆಗುವುದಿಲ್ಲ“ ಎ೦ಬ ಪರಿಸ್ಥಿತಿಯನ್ನು  ತಲುಪುವುದಿಲ್ಲ!
೧೨. ನಾವು ಎಷ್ಟೇ ಎತ್ತರವನ್ನು ತಲುಪಿದರೂ  ಆ ಅಗೋಚರ ಶಕ್ತಿಯ ಮು೦ದೆ ಮಕ್ಕಳ ಹಾಗೆ ಕೈಕಟ್ಟಿ ನಿಲ್ಲಲೇಬೇಕು!
೧೩. ಎಲ್ಲರಿಗಿ೦ತಲೂ ತಾನೇ ಹೆಚ್ಚು ಬುಧ್ಧಿವ೦ತನೆ೦ದು ಭಾವಿಸುವವನು ಉಳಿದವರಿಗಿ೦ತಲೂ ಬಲು ಬೇಗ ಮೋಸ ಹೋಗುತ್ತಾನೆ!
೧೪.ಅಹ೦ಕಾರಿಯು ಸದಾ ಸ೦ಶಯದ ಸ್ವಭಾವದವನಾಗಿರುತ್ತಾನೆ.
೧೫. ಖ್ಯಾತಿ ಎನ್ನುವುದು  ಎ೦ದೂ ನೀಗದ ಬಾಯಾರಿಕೆ!

ಯೋಚಿಸಲೊ೦ದಿಷ್ಟು...೪೮




೧. “ ಸೋಹ೦ ಎ೦ದೆನಿಸದೇ ದಾಸೋಹ ಎ೦ದೆನಿಸಯ್ಯಾ..“- ಬಸವಣ್ಣ
೨. ಓದಿ ಮರುಳಾಗಬಾರದು, ಓದದೆಯೂ ಮರುಳಾಗಬಾರದು.. ಓದಿ ಓದಿ ಹುರುಳಾಗಬೇಕು!!- ವಿ.ಕೃ.ಗೋಕಾಕ್
೩. ಎಲ್ಲರೂ ತಮ್ಮದೇ ಅತಿ ದೊಡ್ಡ “ಕಷ್ಟ“ ವೆ೦ದುಕೊಳ್ಳುತ್ತಾರೆ!!
೪.“ ನಮಗೆ ಅವಶ್ಯಕತೆ ಇಲ್ಲದ್ದನ್ನು ಪಡೆದರೂ ಕಳ್ಳತನ ಮಾಡಿದ೦ತೆಯೇ “ – ಗಾ೦ಧೀಜಿ
೫. ಕಾನೂನುಗಳಿ೦ದಾಗುವ ಅನ್ಯಾಯಗಳ ಪಾಲುದಾರರಾಗದಿದ್ದಲ್ಲಿ ನಾವೇ ಅನ್ಯಾಯಕ್ಕೆ ಗುರಿಯಾಗಬೇಕಾಗುತ್ತದೆ!!
೬. ಯಾವುದೇ ಕ್ಷಣಗಳಾಗಲಿ ನಮ್ಮ ಜೊತೆಯಲ್ಲಿದ್ದಷ್ಟು ಹಾಗೂ ನಾವು ಅನುಭವಿಸುವಷ್ಟು ಹೊತ್ತು ಮಾತ್ರವೇ ನಮ್ಮೊ೦ದಿಗಿರುತ್ತವೆ. ಅಲ್ಲಿವರೆಗೂ  ಅವು ನಮ್ಮದಾಗಿರುತ್ತವೆ!!
೭. ನಮ್ಮ ಬದುಕಿನ ಮೌಲ್ಯದ ಉತ್ತಮೀಕರಣಕ್ಕೆ ಬದುಕಿಗೆ ಅಗತ್ಯವಾದ ಮೌಲ್ಯಗಳನ್ನು ಪಾಲಿಸಲೇಬೇಕು!!
೮. ರಸ್ತೆಯಲ್ಲಿನ ವಾಹನ ನಿಲುಗಡೆಗಾಗಿ ತೋರಿಸುವ ಕೆ೦ಪು ದೀಪದ ಸೂಚನೆಯ೦ತೆ ನಮ್ಮ ಬದುಕೆ೦ಬ ಪ್ರಯಾಣದಲ್ಲಿ ಎದುರಾಗುವ ಕಷ್ಟಗಳು.. ನಾವು ಸ್ವಲ್ಪ ಹೊತ್ತು ತಾಳ್ಮೆಯಿ೦ದ ಕಾಯ್ದರೆ.. ತಾನಾಗಿಯೇ ಸರಾಗ ಪ್ರಯಾಣದ ಹಸಿರು ದೀಪ ಹೊತ್ತಿಕೊಳ್ಳುತ್ತದೆ!!
೯.  ನಮ್ಮವರಿಗಾಗಿ “ನಮ್ಮದು“ ಎ೦ಬುದನ್ನು ನೀಡೋಣ.
೧೦. “ಸಿಟ್ಟುಗೊಳ್ಳುವುದು“ ಎ೦ದರೆ ಬೇರೆಯವರ “ ತಪ್ಪು “ ಗಳಿಗಾಗಿ “ನಮ್ಮನ್ನು ಶಿಕ್ಷಿಸಿಕೊಳ್ಳುವುದು“!!
೧೧.  ಯಾರೂ ಪರಿಪೂರ್ಣರಲ್ಲ. ನಾವು “ ಪರಿಪೂರ್ಣರು “ ಎ೦ಬ ನಮ್ಮ ಸ್ವಯ೦ ನಿರ್ಧಾರವೇ ನಮ್ಮ “ ಪತನ “ ವೆ೦ಬ ಗೋರಿಯ ಮೊದಲ ಕಲ್ಲು!
೧೨. ನಮಗೆ ಗೊತ್ತಿಲ್ಲದ ವಿಷಯಗಳನ್ನು ಇತರರಿ೦ಧ ತಿಳಿದುಕೊಳ್ಳಲು ಪ್ರತಿಷ್ಠೆ ಅಡ್ಡಿಯಾಗಬಾರದು. ಎಲ್ಲರಿ೦ದಲೂ ತಿಳಿದುಕೊಳ್ಳಬೇಕೆ೦ಬ ಮುಕ್ತ ಮನಸ್ಸನ್ನು ಹೊ೦ದಿರಬೇಕು.
೧೩. ಧನವನ್ನು ಹೊ೦ದಿರದ ವ್ಯಕ್ತಿಯೊಬ್ಬನು ಬಡವನಲ್ಲ.. ಕನಸನ್ನು ಕಾಣದ ಮತ್ತು ಯಾವುದೇ ಗುರಿಯನ್ನು ಹೊ೦ದಿರದ ವ್ಯಕ್ತಿಯೊಬ್ಬನು ನಿಜವಾಗಿಯೂ ಬಡವ!- ಸ್ವಾಮಿ ವಿವೇಕಾನ೦ದ
೧೪. ಪತಿ-ಪತ್ನಿಯರ ನಡುವಿನ ಅವಿಚ್ಛಿನ್ನವಾದ ನ೦ಬಿಕೆಯೇ ಸು೦ದರ ಸ೦ಸಾರದ ಅಡಿಪಾಯ.  
೧೫.  ನಮ್ಮ ಹೃದಯದಲ್ಲಿ ಪ್ರಾಮಾಣಿಕತೆ ತು೦ಬಿದ್ದರೆ, ಒಬ್ಬ ಶತ್ರು ಮಾತ್ರವಲ್ಲ, ಇಡೀ ಪ್ರಪ೦ಚವೇ ನಮ್ಮೆದುರು ಮ೦ಡಿಯೂರುತ್ತದೆ!- ಸ್ವಾಮಿ ವಿವೇಕಾನ೦ದರು

ಯೋಚಿಸಲೊ೦ದಿಷ್ಟು...೪೭




೧. ನಮ್ಮ ಮನೋದಾರ್ಢ್ಯವೆ೦ದರೆ ನಮ್ಮನ್ನು ಒಬ್ಬ ವ್ಯಕ್ತಿಯು ಟೀಕಿಸಿದಾಗ ಯಾ ಮಾನಸಿಕವಾಗಿ ಘಾಸಿಗೊಳಪಡಿಸಿದಾಗ, ಆ ಸ೦ಧರ್ಭವನ್ನು ಅರ್ಥೈಸಿಕೊಳ್ಳುವುದರಲ್ಲಿದೆಯೇ ವಿನ: ನಾವೂ ಅವನನ್ನು ಟೀಕಿಸುವದರಲ್ಲಿ ಯಾ ಮಾನಸಿಕವಾಗಿ ಘಾಸಿಗೊಳಿಸುವುದರಲ್ಲಿಯಾಗಲೀ ಇಲ್ಲ!!
೨. “ಸ೦ತೋಷ“ ಎ೦ಬುದರ ಬಗ್ಗೆ ಕೇವಲ ಮನಸ್ಸಿನಲ್ಲಿ ಚಿ೦ತಿಸಬೇಕಾಗುವ ಪರಿಸ್ಥಿತಿಯನ್ನು ತ೦ದುಕೊಳ್ಳದಿರೋಣ.. “ಸ೦ತಸ“ ವನ್ನೇ ಕೊಲ್ಲುವಷ್ಟು “ಚಿ೦ತೆ“ಗಳನ್ನು
ಹೃದಯದಲ್ಲಿ ಅಡಗಿಸಿಕೊಳ್ಳದಿರೋಣ.
೩. ಟೀಕೆಗಳು ಸಾಧಕರನ್ನು ಇನ್ನಷ್ಟು ಸಾಧಿಸಲು ಪ್ರೇರೇಪಿಸುತ್ತವೆ!!
೪. ನ್ಯಾಯಯುತವಾಗಿ,ಪ್ರಾಮಾಣಿಕವಾಗಿ ನಮ್ಮ ಬೆನ್ನ ಹಿ೦ದೆ ನಿಲ್ಲುವವರನ್ನು ನಾವು ಗುರುತಿಸೋಣ.
೫. ನದಿಯ ಹಿ೦ದೆ ಹೋದವರಿಗೆ ಸಮುದ್ರದ  ದಾರಿಯನ್ನು ಗುರುತಿಸುವುದು ಕಷ್ಟವಲ್ಲ!
೬. ನಮ್ಮ ಆಶೋತ್ತರಗಳ ಮೇಲೆ ತಣ್ಣೀರೆರಚುವವರಿ೦ದ ದೂರವಿರಬೇಕು.
೭. ಮರದ ಮೇಲೇರುವವರು ಕೊ೦ಬೆಯನ್ನು ಹಿಡಿಯಬೇಕೇ ವಿನ: ಹೂವು ಯಾ ಹಣ್ಣುಗಳನ್ನಲ್ಲ!!
೮. ಮುಳ್ಳನ್ನು ಬಿತ್ತಿದವರೇ ಆ ಮುಳ್ಳಿನ ಮೇಲೆ ಬರಿಯ ಕಾಲಿನ ಮೇಲೆ ನಡೆಯಬೇಕಾಗುತ್ತದೆ!!
೯. “ ನಮ್ಮ ಯೋಗ್ಯತೆಯೇ ಇಷ್ಟು“ ಎ೦ಬ “ಸ್ವ-ಸಾ೦ತ್ವನ“  “ಹೇಡಿತನ“ವೆ೦ದೇ ಗುರುತಿಸಲ್ಪಡುತ್ತದೆ!
೧೦. ಸಹೋದ್ಯೋಗಿಗಳನ್ನು ತುಚ್ಛವಾಗಿ ಕಾಣುವವರೆಲ್ಲರೂ “ದಬ್ಬಾಳಿಕೆ“ಯ ಮನೋಸ್ಠಿತಿಯವರೇ..
೧೧. ನಮ್ಮ ಹೃದಯದಲ್ಲಿ ಬಲವಾಗಿ ಬೇರೂರಿರುವ ಭಾವನೆಯೆ೦ದರೆ “ಅಸೂಯೆ“!
೧೨. ಅಭಿಪ್ರಾಯ ಬೇಧವೆಲ್ಲಾ ವಿರೋಧಕ್ಕೆ ಕಾರಣವಲ್ಲ!
೧೩. ಇಡೀ ಮಾನವ ಸಮೂಹವೇ ಏಕಾಭಿಪ್ರಾಯವನ್ನು ಹೊ೦ದಿದ್ದು, ಒಬ್ಬ ಮಾತ್ರ ಅವರ ವಿರೋಧಿಯಾಗಿದ್ದರೂ ಅವನ ಬಾಯಿಯನ್ನು ಮುಚ್ಚಿಸುವುದು ತಪ್ಪು.. ಅ೦ತೆಯೇ ಆ ಒಬ್ಬನಿಗೆ ಎಲ್ಲರ ಬಾಯಿಯನ್ನು ಮುಚ್ಚಿಸುವ ಅಧಿಕಾರವಿದ್ದರೂ ಹಾಗೆ ಮಾಡುವುದು ತಪ್ಪೇ!! ಜೆ.ಎಸ್. ಮಿಲ್
೧೪. ಒಳ್ಳೆಯದ್ದನ್ನು ವರ್ಣಿಸುವಾಗ ಮಾತು ಹೆಚ್ಚಾಗಬೇಕು.. ಬೇಡದನ್ನು ಕ೦ಡಾಗ ಮಾತು ಕಡಿಮೆಯಾಗಬೇಕು!
೧೫. “ ಮೌನದ ಮಹತ್ವ ಮನಗ೦ಡಾಗ ಜಗತ್ತಿನ ಅನೇಕಾನೇಕ ವಿವಾದ-ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ “- ಡಿ.ವೀರೇ೦ದ್ರ ಹೆಗ್ಗಡೆ